HomeKarnataka Newsಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ರಣಭೀಕರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ರಣಭೀಕರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

For Dai;y Updates Join Our whatsapp Group

Spread the love

ಬೆಂಗಳೂರು:– ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ರಣಭೀಕರ ಮಳೆ ಆಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ನಗರದ ಹಲವೆಡೆ ಸಾಧಾರಣ ಮಳೆಯಾಗಿದೆ. ಇನ್ನು ಮಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿರುವ ಮುನ್ಸೂಚನೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಹಾಸನ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂನ್ 14ರಂದು ಎಲ್ಲೆಲ್ಲಿ ಮಳೆ?:

ಶನಿವಾರ ಅಂದ್ರೆ ನಾಳೆ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಜೂನ್‌ 15ರಂದು ಎಲ್ಲೆಲ್ಲಿ ಮಳೆ?:

ಭಾನುವಾರ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಯಿದೆ. ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್‌ಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಮುಂದಿನ ವಾರವೂ ಸಹ ಮಳೆ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ:

ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯಿಂದಾಗಿ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತಗಳು ನದಿ ತೀರ ಮತ್ತು ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ನೀಡಿವೆ. ಮುಂದಿನ ದಿನಗಳಲ್ಲಿಯೂ ಭಾರಿ ಮಳೆಯಾಗುವ ಸಂಭವವಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!