ದೇವನಹಳ್ಳಿ: ಪಾಕಿಸ್ತಾನ ಗಡಿಯಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿರವರ ಏಕೈಕ ಪುತ್ರ ಯೋಧ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ.
Advertisement
ಮುರಳಿ ನಾಯಕ್ ಫಾರ್ಥೀವ ಶರೀರ ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಏರ್ಪೋಟ್ ನ ಕಾರ್ಗೋ ಟರ್ಮಿನಲ್ ನಲ್ಲಿ ಯೋಧರಿಂದ ಅಂತಿಮ ನಮನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.
ಸೇನೆಯ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿ ಪಾರ್ಥಿವ ಶರೀರ ಆಂದ್ರಕ್ಕೆ ರವಾನಿಸಲಿದ್ದಾರೆ. ಯೋಧರ ಮರಣದ ಸುದ್ದಿ ತಿಳಿಯುತ್ತಿದ್ದಂತೆಯೇ ಗೋರಂಟ್ಲ ಮಂಡಲದ ಪುದಗುಂಡ್ಲಪಲ್ಲಿ ತಾಂಡಾದಲ್ಲಿ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.