ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಂತೋಷ್ ಲಾಡ್

0
Spread the love

ಗದಗ: ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ, ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ‌ ವಿನಃ ಸಚಿವ ಸಂಪುಟ‌ ಸರ್ಜರಿ‌ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.

Advertisement

ಜನರ ಸಮಸ್ಯೆಗಳಿಗಿಂತ‌‌ ಹಾಗೂ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ. ಜನರ ಮಹತ್ವದ ವಿಚಾರಗಳಿಗೆ ಗಮನ‌ ನೀಡಬೇಕು ಎಂದರು.

ಡಿಸಿಎಂ ಡಿಕೆಶಿ, ಸಚಿವ ರಾಜಣ್ಣ ಮಧ್ಯೆ ಟಾಕ್ ವಾರ್ ವಿಚಾರಕ್ಕೆ ಸಂಬಂಧಿಸಿದಂತೆ
ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ ಅವರವರಿಗೆ ಬಿಟ್ಟಿದ್ದಾಗಿದೆ. ಯಾರೂ ಹೊಸ ಸಿಎಂ ವಿಚಾರವನ್ನು ತೇಲಿಬಿಟ್ಟಿದ್ದಾರೆಯೋ ಅವರನ್ನೇ ಸುದ್ದಿಗಾರರು ಪ್ರಶ್ನಿಸಬೇಕೇ ಹೊರತು ನನ್ನನ್ನಲ್ಲ. ನನಗೆ ಸಂಬಂಧವಿಲ್ಲದ ಅಥವಾ ತಿಳಿಯದೇ ಇರುವ ವಿಚಾರದ ಬಗ್ಗೆ ಮಾತನಾಡುವುದು‌ ಸೂಕ್ತವಲ್ಲ. ನಾನು‌ ಯಾರ ಪರವೂ ಅಲ್ಲ ,ವಿರೋದವೂ‌ ಅಲ್ಲ. ನಾನು‌ ಕಾಂಗ್ರೆಸ್ ಪಕ್ಷದ ಪರ ಎಂದು‌ ಲಾಡ್ ಹೇಳಿದ್ದಾರೆ.

ಇನ್ನೂ ದೇಶದ ಪರಿಸ್ಥಿತಿಯಂತೂ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತಿನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ. ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು.

ವಿಶ್ವವಿದ್ಯಾಲಯ ಬಂದ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಇಲಾಖೆಯ ಸಚಿವ ಅಲ್ಲ. ಆದ್ರೆ ಒಂದು ವಿಶ್ವವಿದ್ಯಾಲಯ ನಡೆಸಲು ಸಾಕಷ್ಟು ದುಡ್ಡುಬೇಕು. ನನ್ನ ಪ್ರಕಾರ ಒತ್ತಡ ನಿಭಾಯಿಸಲು ಎರಡು ಕೋಟಿ ಇಟ್ಟು ವಿಶ್ವವಿದ್ಯಾಲಯ ಪ್ರಾರಂಭ ಮಾಡಿದ್ರು. ಎರಡು ಕೋಟಿಯಲ್ಲಿ ಹೇಗೆ ವಿಶ್ವವಿದ್ಯಾಲಯ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.ಅದಲ್ಲದೆ ಹಣ ಇಲ್ಲದೇ ಯೂನಿವರ್ಸಿಟಿ ಬಂದ್ ಮಾಡಿದ್ರು ಅಂತಾರೆ ಆದ್ರೆ ಕಾಂಗ್ರೆಸ್ ಮಾದರಿಯಲ್ಲೇ ಬಿಜೆಪಿ ಗ್ಯಾರಂಟಿ ಕೊಡುತ್ತಿದೆ ಎಂದರು.

12 ಕೋಟಿವರೆಗೆ ಟ್ಯಾಕ್ಸ್ ಫ್ರೀ ಮಾಡಿದ್ದಾರೆ.. ಇದು ಬರ್ಡನ್ ಅಲ್ವಾ? ಕಾರ್ಪೊರೇಟ್ ಟ್ಯಾಕ್ಸ್ ಪ್ರಯೋಜನದಿಂದಾಗಿ 1.5 ಲಕ್ಷ ಕೋಟಿ ಲಾಸ್ ಇದೆ. ಆದ್ದರಿಂದ ಜಿಎಸ್ ಟಿ ಯಾಕೆ ಕಡಿಮೆ ಮಾಡಬಾರದು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.ಈ ಸಂದರ್ಭದಲ್ಲಿ ಶಾಸಕ ಜಿ ಎಸ್ ಪಾಟೀಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.


Spread the love

LEAVE A REPLY

Please enter your comment!
Please enter your name here