ಪ್ರತಾಪ್ ಸಿಂಹ PIL ವಜಾಗೊಳಿಸಿದ ಹೈಕೋರ್ಟ್: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

0
Spread the love

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೂರು ಪಿಐಎಲ್​ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇನ್ನೂ ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದು,

Advertisement

ನಗರದದಲ್ಲಿ ಮಾತನಾಡಿದ ಅವರು, ಬ್ಯಾಲೆಟ್‌ನಲ್ಲಿ ಬಂದಿರೋ ಸರ್ಕಾರ ಇದು. ಬ್ಯಾಲೆಟ್ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದೇವೆ. ನನ್ನ ಮತ ನನ್ನ ಹಕ್ಕು ಎಂದು ಹೇಳುತ್ತಿದ್ದೇವೆ. ಮತ ಆಯ್ಕೆ ಮಾಡಿರೋ ಸರ್ಕಾರ ಇದು. ಈ ಸರ್ಕಾರ ಮಾಡಿರೋ ನಿರ್ಧಾರ ಇದು. ಸಂವಿಧಾನ ಬದ್ಧವಾದ ನಿರ್ಧಾರ ನಾವು ಮಾಡಿಕೊಂಡು ಬಂದಿದ್ದೇವೆ. ಸಂವಿಧಾನವನ್ನು ಪ್ರತಾಪ್ ಸಿಂಹ ಮತ್ತು ಬಿಜೆಪಿಯವರು ಸರಿಯಾಗಿ ಓದಲಿ.

ಆಗ ನಿಮಗೆ ಏನೇನು ಹಕ್ಕು ಇದೆ ಅರ್ಥ ಆಗುತ್ತದೆ ಎಂದು ಕಿಡಿಕಾರಿದರು. ನ್ಯಾಯಾಲಯ ಕೂಡಾ ಸಂವಿಧಾನದ ಮೇಲೆ ನಡೆಯುತ್ತದೆ. ನಾವು ಸಂವಿಧಾನದ ಮೇಲೆ ನಡೆಯೋದು. ಪ್ರಮಾಣ ಸ್ವೀಕಾರ ಮಾಡೋದು ಸಂವಿಧಾನದ ಮೇಲೆ. ಪಾಪ ಅವನಿಗೆ ಪಾರ್ಟಿಯಲ್ಲಿ ಟಿಕೆಟ್ ಕೊಡಲಿಲ್ಲ. ನಾನು ರಾಜಕೀಯದಲ್ಲಿ ಬದುಕಿರಬೇಕು ಅಂತ ಪಾಪ ಇಂತಹ ಕೆಲಸ ಮಾಡುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದು ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here