ಕಾಲ್ತುಳಿತ ಕೇಸ್: ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಗೆ ರಿಲೀಫ್ ಕೊಟ್ಟ ಹೈಕೋರ್ಟ್.. ಷರತ್ತುಬದ್ಧ ಜಾಮೀನು ಮಂಜೂರು!

0
Spread the love

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ಜೂನ್ 4 ರಂದು ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರ್‌ಸಿಬಿ ಫ್ರಾಂಚೈಸಿಯ ಮಾರ್ಕೆಟಿಂಗ್ ಹೆಡ್‌ ನಿಖಿಲ್ ಸೋಸಲೆ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

Advertisement

ಪ್ರಕರಣದಲ್ಲಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾ. ಕೃಷ್ಣಕುಮಾರ್‌ ಅವರಿದ್ದ ಪೀಠ ನಿಖಿಲ್‌ ಸೋಸಲೆ, ಸುನೀಲ್‌ ಮ್ಯಾಥ್ಯೂ, ಕಿರಣ್, ಶಮಂತ್ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಲ್ಲದೇ ದೇಶ ಬಿಟ್ಟು ಹೋಗದಂತೆ ಷರತ್ತು ವಿಧಿಸಿದೆ. ಅರ್ಜಿದಾರರ ಪರ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು.


Spread the love

LEAVE A REPLY

Please enter your comment!
Please enter your name here