ಹುಬ್ಬಳ್ಳಿ; ಕಾಂಗ್ರೆಸ್ ಸರ್ಕಾರದ ಅಧಿಕಾರ ದುರುಪಯೋಗಕ್ಕೆ ಹೈಕೋರ್ಟ್ ತಕ್ಕ ಶಾಸ್ತಿ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ, ಡಿಜೆ ಹಳ್ಳಿ ಕೆಜಿ ಹಳ್ಳಿ ಮೈಸೂರು ಪ್ರಕರಣ ವಾಪಾಸು ಕುರಿತು ಸಂತಸ ವ್ಯಕ್ತಪಡಿಸಿದರು
Advertisement
ಹೈಕೋರ್ಟ್ ನೀಡಿರುವ ತೀರ್ಪು ರಾಜ್ಯ ಕಾಂಗ್ರೆಸ್ ಸರ್ಕಾರದ ಅಧಿಕಾರ ದುರುಪಯೋಗಕ್ಕೆ ತಕ್ಕ ಶಾಸ್ತಿ ಮಾಡಿದಂತಿದೆ. ನ್ಯಾಯಾಧೀಕರಣದ ಈ ನಿರ್ಧಾರ ಕಾನೂನು ಸುವ್ಯವಸ್ಥೆಯ ಮಹತ್ವವನ್ನು ಎತ್ತಿ ಹಿಡಿದಿದೆ.
ಕಾನೂನಿನ ಮೇಲಿನ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ. ಇದಕ್ಕಾಗಿ ನ್ಯಾಯಾಲಯಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.