ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

0
Spread the love

ಬೆಂಗಳೂರು: ರಾಜ್ಯದಲ್ಲಿ ಆರ್​​​ಎಸ್​​ಎಸ್​​ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ವಿಚಾರದ ಸಂಘರ್ಷ ತಾರಕ್ಕೇರಿದೆ. ಈ ಮಧ್ಯೆ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಆರ್​ಎಸ್​ಎಸ್​​ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸುವ ಮೂಲಕ ಹೈಕೋರ್ಟ್ ಸೂಚನೆ ನೀಡಿದೆ. ಈ ಆದೇಶದಿಂದ ಇಂದು ಚಿತ್ತಾಪುರದಲ್ಲಿ‌ ರ‍್ಯಾಲಿ ನಡೆಸಲು ನಿರ್ಧರಿಸಿದ್ದ ಆರ್​ಎಸ್​​ಎಸ್ ಮತ್ತು ದಲಿತ ಸಂಘಟನೆಗಳಿಗೆ ಸದ್ಯ ಅವಕಾಶ ಇಲ್ಲದಂತಾಗಿದೆ.

Advertisement

ಇಂದು ಪಥ ಸಂಚಲನ ನಡೆಸಲು ಅವಕಾಶ ನೀಡದ ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಜಿಎಸ್ ಕಮಲ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿರುವುದರಿಂದ ಹಲವು ಸಂಘಟನೆಗಳು ಒಂದೇ ದಿನ, ಒಂದೇ ಸ್ಥಳ ಮತ್ತು ಒಂದೇ ಮಾರ್ಗದಲ್ಲಿ ರ‍್ಯಾಲಿ ನಡೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದಾರೆ. ಆದ ಕಾರಣ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳಂದು ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್​​ ತಿಳಿಸಿತು.

ಅದ್ದರಿಂದ ಇದೇ ದಿನ ಹೊಸದಾಗಿ ಮನವಿ ಸಲ್ಲಿಸಿ, ಯಾವ ಮಾರ್ಗದಲ್ಲಿ ರ‍್ಯಾಲಿ ನಡೆಸಲಾಗುವುದು ಎಂಬುದನ್ನು ತಿಳಿಸಿ, ಜಿಲ್ಲಾಡಳಿತ ಮತ್ತು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್​​ಗೆ ಮನವಿ ಸಲ್ಲಿಸಬೇಕು. ಅದರಂತೆ, ಜಿಲ್ಲಾ ಮತ್ತು ತಾಲೂಕು ಆಡಳಿತ ರ‍್ಯಾಲಿಗೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ ಪೀಠ, ಅರ್ಜಿಯ ವಿಚಾರಣೆಯನ್ನು ಮುಂದೂಡಿತು.

Spread the love

LEAVE A REPLY

Please enter your comment!
Please enter your name here