ಬೆಂಗಳೂರು:- ಹಿಂದೂ ದೇವರ ವಿಗ್ರಹ ವಿರೂಪಗೊಳಿಸಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿನಲ್ಲಿ ಜರುಗಿದೆ.
Advertisement
ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಇನ್ನೂ ಈ ಘಟನೆಯನ್ನು ಹಿಂದೂ ಸಂಘಟನೆ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.
ಆರೋಪಿಗಳು, ಕಲ್ಲು ಹಿಡಿದು ಸಿಸಿ ಕ್ಯಾಮೆರಾದಲ್ಲಿ ಮುಖ ಕಾಣಿಸದಂತೆ ದೇವಸ್ಥಾನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ಹಾಗೂ ಭಕ್ತಾದಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಇನ್ನೂ ದೇವರ ವಿಗ್ರಹ ವಿರೂಪ ಗೊಳಿಸಿದವನ ವಿರುದ್ಧ ಸಿಡಿದೆದ್ದ ಭಕ್ತರು, ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.