ವಿಜಯಸಾಕ್ಷಿ ಸುದ್ದಿ, ಗದಗ : ನಗರದ ವೀರಶೈವ ಲೈಬ್ರರಿ ಹತ್ತಿರ ಸುದರ್ಶನ ಚಕ್ರ ಯುವ ಮಂಡಳ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿಯನ್ನು 21ನೇ ದಿನದಂದು ವಿಶೇಷ ಪೂಜೆ ಸಲ್ಲಿಸಿ ವಿಸರ್ಜನಾ ಮೆರವಣಿಗೆಗೆ ಸುದರ್ಶನ ಚಕ್ರ ಯುವ ಮಂಡಳ ಮತ್ತು ಹಿಂದೂ ಮಹಾಗಣಪತಿ ಸಮಿತಿಯ ಗೌರವ ಅಧ್ಯಕ್ಷ ಎಸ್.ಎಚ್. ಶಿವನಗೌಡ್ರ ಚಾಲನೆ ನೀಡಿದರು.
Advertisement
ಮೆರವಣಿಗೆಯಲ್ಲಿ ಸುದರ್ಶನ ಚಕ್ರ ಯುವ ಮಂಡಳದ ಮತ್ತು ಹಿಂದೂ ಮಹಾಗಣಪತಿ ಸಮಿತಿಯ ಅಧ್ಯಕ್ಷ ಸುಧೀರ ಕಾಟಿಗಾರ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಹಬೀಬ, ಬಿಜೆಪಿಯ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಹಿರಿಯರಾದ ಮೋಹನ್ ಮಾಳಶೆಟ್ಟಿ, ರವಿ ಮಾಳೆಕೊಪ್ಪ, ಅಶ್ವಿನಿ ಜಗತಾಪ, ವಂದನಾ ವೇರಣೆಕರ, ನಗರಸಭೆಯ ಸದಸ್ಯರಾದ ಹುಲಿಗೆಮ್ಮ ಹಬೀಬ, ಶಿವರಾಜ ಹಿರೇಮನಿಪಾಟೀಲ, ಕುಮಾರ ಮಾರನಬಸರಿ, ಸುರೇಶ ಮೇದಾರ, ಯುವ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.