ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೇನ್ನೂರು ಬಳಿಯಿರುವ ಐತಿಹಾಸಿಕ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟ ಪರಿಣಾಮ ಧಗದಗನೇ ಹೊತ್ತಿ ಉರಿದಿದೆ.
ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಸರ್ಕಾರ ಇತ್ತೀಚಿಗೆ ಈ ಸ್ಥಳವನ್ನ ಆಯ್ಕೆ ಮಾಡಿತ್ತು ಈಗ ಅದೇ ಅರಣ್ಯಧಾಮಕ್ಕೆ ಬೆಂಕಿಯ ಜ್ವಾಲೆ ಆವರಿಸಿದೆ. ಸಂಪದ್ಭರಿತ ವನಸ್ಪತಿ ಗಿಡಮೂಲಿಕೆಗಳು ಈ ಗುಡ್ಡದಲ್ಲಿತ್ತು. ಕೃಷ್ಣಮೃಗ ಅಭಯಾರಣ್ಯ, ಪ್ರಾಣಿ ಪಕ್ಷಿಗಳು ಇರೋ ಅಭಯಾರಣ್ಯದಲ್ಲಿ ಈ ಘಟನೆ ನಡೆದಿದೆ.
ಘಟನೆ ಬೆನ್ನಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.



