ಬೂದಿಗೆರೆ ಕ್ರಾಸ್ ಬಳಿ ಹಿಟ್ & ರನ್ ಕೇಸ್: ವಿದ್ಯಾರ್ಥಿನಿ ಬಲಿ ಪಡೆದಿದ್ದ ಟಿಪ್ಪರ್‌ ಚಾಲಕ ಅರೆಸ್ಟ್

0
Spread the love

ಬೆಂಗಳೂರು:- ಇಲ್ಲಿನ ಬೂದಿಗೆರೆ ಕ್ರಾಸ್ ಬಳಿ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದ ಹಿಟ್‌ & ರನ್‌ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಆವಲಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಜೆರಾಲ್ಡ್ ಮಂಡಲ್ ಬಂಧಿತ ಆರೋಪಿ. ಇವರು ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಟಿಪ್ಪರ್ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಿದ್ದಾರೆ.

ಅ.29ರ ಬೆಳಗ್ಗೆ 8:50 ಸುಮಾರಿಗೆ ಈ ಅಪಘಾತ ನಡೆದಿತ್ತು. ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ವಿದ್ಯಾರ್ಥಿನಿ ಧನುಶ್ರೀ ರಸ್ತೆಗೆ ಬಿದ್ದಿದ್ದಳು. ಈ ವೇಳೆ ಆಕೆಯ ಮೇಲೆ ಟಿಪ್ಪರ್‌ ಹರಿದಿತ್ತು. ಇದರಿಂದ ಯುವತಿ ಸಾವನ್ನಪ್ಪಿದ್ದಳು. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿತ್ತು. ಇದೀಗ ಆರೋಪಿಯನ್ನು ಯಶಸ್ವಿಯಾಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here