ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ HK ಪಾಟೀಲ್ ಚಾಲನೆ

0
Spread the love

ಗದಗ;- 68ನೇ ಕನ್ನಡ ರಾಜ್ಯೋತ್ಸವ ಆಚರಣೆ ಗದಗ ಜಿಲ್ಲೆಯಲ್ಲಿ ಸಂಭ್ರಮ ಸಡಗರದಿಂದ ನಡೆಯುತ್ತಿದೆ. ಗದಗ  ನಗರದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ ಏರ್ಪಡಿಸಿದ್ದ ಧ್ವಜಾರೋಹಣವನ್ನು  ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಅವರಿಂದ ನೆರವೇರಿಸಲಾಯಿತು.

Advertisement

ಪೊಲೀಸ್,  ಅಬಕಾರಿ, ಅಗ್ನಿಶಾಮಕ, ಎನ್ ಸಿ ಸಿ, ಸೇವಾದಳ, ಮಾಜಿ ಸೈನಿಕರಿಂದ ಆಕರ್ಷಕ ಪಥ ಸಂಚಲನ ನಡೆದಿದ್ದು, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪೊಲೀಸ್ ಇಲಾಖೆ ಕನ್ನಡದಲ್ಲೇ ಪಥ ಸಂಚಲನ ಕಮಾಂಡ್ ನೀಡಿದೆ.

ಆರ್ ಪಿ ಐ ಶಂಕರ ಚೌಧರಿಯಿಂದ ಕನ್ನಡದಲ್ಲೇ ಪರೇಡ್ ಕಮಾಂಡ್ ನಡೆದಿದೆ. ವಿ. ಪ. ಸದಸ್ಯ ಎಸ್ ವಿ ಸಂಕನೂರ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.


Spread the love

LEAVE A REPLY

Please enter your comment!
Please enter your name here