ರಂಭಾಪುರಿ ಶ್ರೀಗಳ ವಿರುದ್ಧ ಪಿತೂರಿಗೆ ಖಂಡನೆ

0
veeranna pavada
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪರಮಪೂಜ್ಯ ಶ್ರೀಮದ್ ರಂಭಾಪುರಿ ಜಗದ್ಗುರುಗಳ ವಿರುದ್ಧ ಶನಿವಾರ ಬಾಗಲಕೋಟೆ ಜಿಲ್ಲೆ ಕಲಾದಗಿ ಗ್ರಾಮದಲ್ಲಿ ನಡೆದ ಪಿತೂರಿಯನ್ನು ತೀವ್ರವಾಗಿ ಖಂಡಿಸುವದಾಗಿ ಭಕ್ತರ ಪರವಾಗಿ ಶಿಗ್ಲಿಯ ವೀರಣ್ಣ ಪವಾಡದ ಹೇಳಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆದಿ ಜಗದ್ಗುರು ರೇಣುಕಾಚಾರ್ಯರ ಪ್ರತಿರೂಪವಾದ ಶ್ರೀಮದ್ ರಂಭಾಪುರಿ ಜಗದ್ಗುರುಗಳ ವಿರುದ್ಧ ನಡೆದ ಈ ಘಟನೆ ಭಕ್ತರ ಮನಸ್ಸಿಗೆ ಬಹಳ ನೋವು ತಂದಿದೆ. ಈ ಕೃತ್ಯಕ್ಕೆ ನೇರವಾಗಿ ಹಾಗೂ ಪರೋಕ್ಷವಾಗಿ ಕಾರಣೀಕರ್ತರಾದವರ ಮೇಲೆ ಆದಿ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ತಕ್ಕ ಶಿಕ್ಷೆಯನ್ನು ನೀಡಲಿ. ರಂಭಾಪುರಿ ಜಗದ್ಗುರುಗಳು ಈ ಕೃತ್ಯದಿಂದ ಧೃತಿಗೆಡದೆ, ಎಂದಿನಂತೆ ವೀರಶೈವ ಧರ್ಮ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಹೇಳಿರುವ ಅವರು, ಈ ಕೃತ್ಯವೆಸಗಿದವರ ವಿರುದ್ಧ ಕಾನೂನು ಕ್ರಮವಾಗಲಿ. ಕಲಾದಗಿ ಗ್ರಾಮದ ವೀರಶೈವ ಮುಖಂಡರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಮನವಿ ಮಾಡುವದಾಗಿ ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here