ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಾರತೀಯರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಭಾರತ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿಗಳನ್ನು ನಡೆಸಿ ಹಲವರ ನೆತ್ತರನ್ನು ಬಸಿದಿದೆ. ಆಪರೇಷನ್ ಸಿಂಧೂರ್ ಕಾರ್ಯಚರಣೆಯನ್ನು ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಇದೀಗ ‘ಆಪರೇಷನ್ ಸಿಂಧೂರ’ ಪೋಸ್ಟರ್ ಶೇರ್ ಮಾಡುವ ಮೂಲಕ ಖ್ಯಾತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಕುತೂಹಲ ಮೂಡಿಸಿದ.
ಹೊಂಬಾಳೆ ಫಿಲ್ಮ್ಸ್ ಹೊಸ ಪೋಸ್ಟರ್ ಹಂಚಿಕೊಂಡಿದೆ. ಆದರೆ ಇದರ ಹಿಂದಿನ ಉದ್ದೇಶ ಮಾತ್ರ ಇನ್ನೂ ಸ್ಪಷ್ಟವಾಗಿಲ್ಲ. ಸದ್ಯಕ್ಕಂತೂ ‘ಆಪರೇಷನ್ ಸಿಂಧೂರ ಸಿನಿಮಾ ಆಗುತ್ತಾ ಎಂಬ ಕುತೂಹಲ ಗಾಂಧಿನಗರದಲ್ಲಿ ಕೇಳಿ ಬಂದಿದೆ.
‘ಆಪರೇಷನ್ ಸಿಂಧೂರ ಎಂದು ರೆಡ್ ಥಿಮ್ನಲ್ಲಿ ಮಸ್ತ್ ಪೊಸ್ಟರ್ ಔಟ್ ಆಗಿದೆ. ಇದೀಗ ಪೊಸ್ಟರ್ ಕಂಡು ಹೀರೋ ಯಾರಿರಬಹುದು ಎಂದು ಪ್ರೇಕ್ಷಕರು ಊಹಿಸುತ್ತಿದ್ದಾರೆ. ಆದರೆ ಈ ಪೋಸ್ಟರ್ ಕಂಡು ಅನೇಕರು ಇದು ಸಿನಿಮಾ ಆಗುತ್ತಾ? ಅಥವಾ ಸುಮ್ಮನೆ ಪೋಸ್ಟರ್ ರಿಲಿಸ್ ಮಾಡಿರಬೋದು ಎಂದೂ ಕಮೆಂಟ್ ಮಾಡಿದ್ದಾರೆ. ಸದ್ಯಕ್ಕೆ ಆಪರೇಷನ್ ಸಿಂಧೂರ ಹೊಂಬಾಳೆಯ ಈ ಫೊಟೋ ಸಾಕಷ್ಟು ಕುತೂಹಲ ಮೂಡಿಸಿದೆ.
ಆಪರೇಷನ್ ಸಿಂಧೂರ್ ಕಾರ್ಯಚರಣೆ ಕುತಿತು ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಧ್ರುವ ಸರ್ಜಾ ತಮ್ಮ ಎಕ್ಸ್ ಖಾತೆಯಲ್ಲಿ ಭಾರತದಲ್ಲಿ ಇದ್ದುಕೊಂಡು ಪಾಕಿಸ್ತಾನ ಬೆಂಬಲಿಸುವವರ ವಿರುದ್ಧ ಕಿಡಿ ಕಾರಿದ್ದಾರೆ.