ಕೋಲಾರ: ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ ಮಾಡಿದ ಪ್ರಕರಣದಲ್ಲಿ ತಿರುಪತಿಯಲ್ಲಿ ತಲೆ ಮರೆಸಿಕೊಂಡಿದ್ದ 8 ಮಂದಿಯನ್ನು ಕೋಲಾರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಂಜಿತ್, ರಾಹುಲ್, ನಂದೀಶ್ ಸೇರಿದಂತೆ ಒಟ್ಟು 8 ಆರೋಪಿಗಳ ಬಂಧನ ಮಾಡಲಾಗಿದೆ. ಬಂಧಿತರು ಮುಳಬಾಗಿಲು ಮೂಲದವರಾಗಿದ್ದಾರೆ. ಆ.14ರಂದು ಆರೋಪಿಗಳು ಸಿನಿಮಾ ಸ್ಟೈಲ್ನಲ್ಲಿ ಮನೆ ಕಬ್ಜಾ ಮಾಡಲು ಮುಂದಾಗಿದ್ದಾರೆ.
ಈ ವೇಳೆ ಶಿಕ್ಷಕಿ ದಿವ್ಯಶ್ರೀ ಬೆದರಿಕೆ ಹಾಕಿ ಅವರು ವಾಸವಿದ್ದ ಮನೆ ಬರೆದುಕೊಡುವಂತೆ ಹೆದರಿಸಿದ್ದಾರೆ. ಇದೇ ವೇಳೆ ಚಾಕುವಿನಿಂದ ಕತ್ತು ಕೊಯ್ದು ದಿವ್ಯಶ್ರೀ ಹತ್ಯೆ ಮಾಡಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಮಾಹಿತಿ ನೀಡಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ದಿವ್ಯಶ್ರೀ ಅವರ ಗಂಡನ ಫೈನಾನ್ಸ್ ವ್ಯವಹಾರಕ್ಕೆ ಸಂಬಂಧಿಸಿ ಚಿಂತಾಮಣಿಯಲ್ಲಿರುವ ಜಮೀನಿನ ವ್ಯಾಜ್ಯದ ವಿಚಾರದಲ್ಲಿ ಕೊಲೆ ನಡೆದಿದೆ. ಕೊಲೆಗಾಗಿ ಸುಪಾರಿ ನೀಡಿದ ಆರೋಪಿಗಾಗಿ ಹುಡುಕಾಟ ನಡೆದಿದೆ. ಆರೋಪಿಗಳಲ್ಲಿ ಅಪ್ರಾಪ್ತ ವಯಸ್ಕರೂ ಇದ್ದು, ಮಾದಕ ದ್ರವ್ಯವ ವ್ಯಸನಿಗಳಾದ ಇವರು ಚಿಲ್ಲರೆ ಕಾಸಿಗಾಗಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಮುಳಬಾಗಿಲು ಪೊಲೀಸರಿಂದ ವಿಚಾರಣೆ ಮುಂದುವರಿದಿದೆ.