400 ಮಂದಿಗೆ ಹನಿಟ್ರ್ಯಾಪ್: ಸ್ಫೋಟಕ ವಿಚಾರ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ!

0
Spread the love

ಬೆಳಗಾವಿ:- ಬರೋಬ್ಬರಿ 400 ಮಂದಿಗೆ ಹನಿಟ್ರ್ಯಾಪ್ ನಡೆದಿದೆ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿ ಸ್ಫೋಟಕ ವಿಚಾರ ಬಾಯಿಬಿಟ್ಟಿದ್ದಾರೆ.

Advertisement

ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಕೇವಲ 38 ನಾಯಕರ ಹನಿಟ್ರ್ಯಾಪ್‌ ಅಲ್ಲ, ಬರೋಬ್ಬರಿ 400 ಮಂದಿಗೆ ಹನಿ ಗ್ಯಾಂಗ್‌ ಬಲೆಗೆ ಸಿಲುಕಿಸಿದೆ. ಇದು ಕರ್ನಾಟಕ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನೂ ಟ್ರ್ಯಾಪ್‌ ಮಾಡಲಾಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಪಕ್ಷ ಮಾತ್ರವಲ್ಲ, ಎಲ್ಲಾ ರಾಜಕೀಯ ಪಕ್ಷಗಳ ನಾಯಕರನ್ನೂ ಸಿಲುಕಿಸಲಾಗಿದೆ. ಹನಿಟ್ರ್ಯಾಪ್ ಗ್ಯಾಂಗ್‌ ವಿರುದ್ಧ ದೂರು ಕೊಡುವಂತೆ ಸಚಿವ ರಾಜಣ್ಣ ಅವರಿಗೆ ನಾನೇ ಹೇಳಿದ್ದೆ. ಇಂತಹ ನಿದರ್ಶನಗಳು ಈ ಹಿಂದೆಯೂ ನಡೆದಿವೆ ಅಂತ ಸಾಹುಕಾರ ಬಹಿರಂಗಪಡಿಸಿದ್ದಾರೆ.

ಹನಿಟ್ರ್ಯಾಪ್ ಪ್ರಕರಣ ಇಂದು ನಿನ್ನೆಯದಲ್ಲ. ಕಳೆದ 20 ವರ್ಷಗಳಿಂದಲೂ ಆಗಿವೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಮೀನಿಗೆ ಬಲೆ ಬೀಸಿದಂತೆ ಬೀಸಿ ಹನಿಟ್ರ್ಯಾಪ್ ಮಾಡಿ ಅವರನ್ನು ತಮಗೆ ಬೇಕಾದಂತೆ ಆಡಿಸುತ್ತಾರೆ. ಹೀಗಾಗಿ ನಾಯಕರು ಮತ್ತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಾಹುಕಾರ್ ಸತೀಶ್‌ ಜಾರಕಿಹೊಳಿ ಸಲಹೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here