ಹನಿಟ್ರ್ಯಾಪ್: ರಾಜಣ್ಣ ಅವರ ವಿಷಯದಲ್ಲಿ ಏನಾಗಿದೆ ಗೊತ್ತಿಲ್ಲ – ಎಂಬಿ ಪಾಟೀಲ್!

0
Spread the love

ವಿಜಯಪುರ:- ಹನಿಟ್ರ‍್ಯಾಪ್ ಬಹಳ ಹೀನಾಯವಾದ ಕೆಲಸ, ಯಾರನ್ನೇ ಆಗಲಿ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಸಚಿವ ರಾಜಣ್ಣ ಅವರ ಹನಿಟ್ರ‍್ಯಾಪ್ ವಿಷಯದಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಅವರು ಸಿಎಂ ಹಾಗೂ ಗೃಹಮಂತ್ರಿಗಳಿಗೆ ತಮಗೆ ಏನಾಗಿದೆ ಎನ್ನುವುದನ್ನು ತಿಳಿಸಿದ್ದಾರೆ. ಈ ರೀತಿ ರಾಜಕೀಯವಾಗಿ ಯಾರೇ ಮಾಡಿದರೂ ಅದು ತಪ್ಪು. ತೇಜೋವಧೆ ಮಾಡುವಂತಹದು ತಪ್ಪು, ಇದು ಬಹಳ ಹೀನಾಯವಾದ ಕೆಲಸ. ಹೀಗಾಗಿ ಇದನ್ನು ಯಾರು ಮಾಡಿದ್ದಾರೆ? ಯಾಕೆ ಮಾಡಿದ್ದಾರೆ? ಎಂದು ತನಿಖೆಯಾಗಬೇಕು. ಸಿಎಂ ಹಾಗೂ ಗೃಹಮಂತ್ರಿಗಳು ಅದರ ಬಗ್ಗೆ ಗಮನ ಹರಿಸುತ್ತಾರೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here