ಕೆ.ಎಲ್.ಇ ನಿರ್ದೇಶಕ ಮುನವಳ್ಳಿಯವರಿಗೆ ಸನ್ಮಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕ್ರಣ್ಣ ಈಶ್ವರಪ್ಪ ಮುನವಳ್ಳಿ ಇವರು 75ನೇ ವರ್ಷದ ಅಮೃತ ಮಹೋತ್ಸವವನ್ನು ಆಚರಿಸಿಕೊಂಡ ನಿಮಿತ್ತ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ತಾತನಗೌಡ ಎಸ್.ಪಾಟೀಲ ಇವರ ನಿಯೋಗದೊಂದಿಗೆ ಹುಬ್ಬಳ್ಳಿಯ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು.

Advertisement

ಸಂಸ್ಥೆಯ ಉಪಾಧ್ಯಕ್ಷರಾದ ವಿಜಯಕುಮಾರ ಎಸ್.ಮಾಟಲದಿನ್ನಿ, ಎಸ್.ಆರ್. ನಾಲತ್ವಾಡಮಠ, ಸಹ ಗೌರವ ಕಾರ್ಯದರ್ಶಿ ಸೋಮನಾಥ ಕೆ.ಜಾಲಿ, ಮಾಜಿ ಅಧ್ಯಕ್ಷ ಎಚ್.ವ್ಹಿ. ಶಾನಭೋಗರ, ಈಶ್ವರಪ್ಪ ಸಿ.ಮುನವಳ್ಳಿ, ಶೇಖಣ್ಣ ಫ.ಗದ್ದಿಕೇರಿ ಉಪಸ್ಥಿತರಿದ್ದರೆಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಅಶೋಕಗೌಡ ಕೆ.ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here