ವಿಜಯಸಾಕ್ಷಿ ಸುದ್ದಿ, ಗದಗ: 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಬೆಳಗಾವಿ ವಿಭಾಗ ಮಟ್ಟದಲ್ಲಿ ಗದಗ ಜಿಲ್ಲೆಯ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಡಾ. ದುರಗೇಶ್ ಕೆ.ಆರ್ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಉತ್ತಮ ಸಹಾಯಕ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಣೆಗೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರನ್ನು ರಾಜ್ಯ ಸರ್ಕಾರಿ ನೌಕರರ ಗದಗ ಜಿಲ್ಲಾ ಸಂಘದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಪದಾಧಿಕಾರಿಗಳಾದ ರಾಜು ಸೊಪಡ್ಲ, ರಾಜು ಕಂತಿಗೊಣ್ಣವರ, ಶ್ರೀಧರ ಚಿನಗುಡಿ, ವಾರ್ತಾಧಿಕಾರಿ ವಸಂತ ಮಡ್ಲೂರ ಮುಂತಾದವರಿದ್ದರು.



