ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಹೆಚ್ಚಾಗಿದ್ದು, ಫ್ರೀಯಾಗಿ ಸಿಗರೇಟ್ ಕೊಡದಿದ್ದಕ್ಕೆ ಬೇಕರಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದ ರಾಘವೇಂದ್ರ ಬೇಕರಿಯಲ್ಲಿ ನಡೆದಿದೆ.
Advertisement
ಮಂಜಯ್ಯ ಶೆಟ್ಟಿ ಹಲ್ಲೆಗೊಳಗಾದ ಬೇಕರಿ ಮಾಲೀಕ ಮಂಜಯ್ಯನಾಗಿದ್ದು, ಭಾನುವಾರ ರಾತ್ರಿ 9:20ರ ಸುಮಾರಿಗೆ ಬೇಕರಿ ಮುಚ್ಚುವ ಸಮಯಕ್ಕೆ ರೌಡಿಗಳ ಗುಂಪೊಂದು ಬಂದು ಬೇಕರಿ ಬಳಿ ಬಂದು ಟೀ, ಸಿಗರೇಟು ಇನ್ನಿತರ ವಸ್ತುಗಳನ್ನ ಫ್ರೀಯಾಗಿ ನೀಡುವಂತೆ ಗಲಾಟೆ ಮಾಡಿ, ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದ ಬೇಕರಿ ಮಾಲೀಕ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಸದ್ಯ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡುವ ದೃಶ್ಯ ಬೇಕರಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.