ಸರ್ಕಾರಿ ಬಸ್- ಸ್ಕೂಟಿ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು

0
Spread the love

ಗದಗ: ಸರ್ಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 16 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಬಳಿ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ. ಲಕ್ಕುಂಡಿ ಗ್ರಾಮದ ಯುವಕ ಪ್ರಜ್ವಲ್ ಜಮೀನಿಗೆ ಹೋಗುವಾಗ ಈ ದುರ್ಘಟನೆ ನಡೆದಿದ್ದು,

Advertisement

ಡಿಕ್ಕಿ ರಭಸಕ್ಕೆ ಸ್ಕೂಟಿ ವಾಹನ ನಜ್ಜುಗುಜ್ಜು ಆಗಿದೆ. ಕೊಲ್ಲಾಪುರದಿಂದ ಗಂಗಾವತಿಗೆ ಹೊರಟಿದ್ದ ಬಸ್ ಟ್ರ್ಯಾಕ್ಟರ್ ಓವರ್‌ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ.

ಅಪಘಾತ ಬಳಿಕ ಬಸ್ ಚಾಲಕ ಪರಾರಿಯಾಗಿದ್ದು, ಇನ್ನೂ ಸ್ಥಳಕ್ಕೆ ಗದಗ ಗ್ರಾಮೀಣ ಸಿಪಿಐ ಶಿವಯೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here