ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

0
Spread the love

ತುಮಕೂರು: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ನಡೆದಿದೆ. ಹೊಳೆ ನರಸಿಪುರ ತಾಲೂಕು, ಕಳ್ಳಿ ಮೂಲದ ನವೀನ್(28), ತಿಪಟೂರು ತಾಲೂಕಿನ ಗಂಗನಘಟ್ಟ ಗ್ರಾಮದ ಶೇಷಾದ್ರಿ(47) ಮೃತ ದುರ್ದೈವಿಗಳಾಗಿದ್ದು,

Advertisement

ನವೀನ್ ಚನ್ನರಾಯಪಟ್ಟಣ ಕಡೆಯಿಂದ ತಿಪಟೂರು ಮಾರ್ಗವಾಗಿ ತೆರಳುತ್ತಿದ್ದರು. ಶೇಷಾದ್ರಿ ಹಾಗೂ ಸಚಿನ್ ಎಂಬುವರು ಬೈಕ್‌ನಲ್ಲಿ ಹಿಂದಿನಿಂದ ಬರುತ್ತಿದ್ದರು. ಮುಂದೆ ಹೋಗುತ್ತಿದ್ದ ನವೀನ್ ಏಕಾಏಕಿ ಬೈಕ್ ತಿರುಗಿಸಿದ ಪರಿಣಾಮ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇನ್ನೂ ಘಟನೆ ಸಂಬಂಧ ನೊಣವಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here