ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರು ಗಂಭೀರ

0
Spread the love

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

Advertisement

ಗದಗ: ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾದ ದುರ್ಘಟನೆ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಜಿಲ್ಲೆಯ ನರಗುಂದ ತಾಲೂಕಿನ ಬೈರನಹಟ್ಟಿ‌ ಗ್ರಾಮದ ಬಳಿ ಬುಧವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, ಬಾಗಲಕೋಟ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬುವವರು ಸ್ಥಳದಲ್ಲೇ ಮೃತಪಟ್ಟ ದಂಪತಿಗಳಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿ ಮರಳಿ ಬಾಗಲಕೋಟಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.

ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಹುಬ್ಬಳ್ಳಿ ಕಡೆಗೆ ಹೊರಟಿತ್ತು ಎನ್ನಲಾಗಿದೆ.

ಸುದ್ದಿ ತಿಳಿದು ನರಗುಂದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ನಡುವಿನಮನಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಪಘಾತದ ನಂತರ ಕಾರಿನಲ್ಲಿ ಶವ ನಜ್ಜುಗುಜ್ಜಾಗಿದ್ದು, ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.


Spread the love

LEAVE A REPLY

Please enter your comment!
Please enter your name here