ಲಾರಿ- ಖಾಸಗಿ ಬಸ್​ ಮಧ್ಯೆ ಭೀಕರ ಅಪಘಾತ: ಮೂವರು ಸಾವು.! ಹಲವರಿಗೆ ಗಂಭೀರ ಗಾಯ

0
Spread the love

ಮೈಸೂರು: ಖಾಸಗಿ ಬಸ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಣಸೂರು ತಾಲೂಕಿನ ಮದುಗಿರಿ ಕೊಪ್ಪಳ್ ಗೇಟ್ ಬಳಿಯ ಮಧ್ಯರಸ್ತೆಯಲ್ಲಿ ಇಂದು ಬೆಳಿಗ್ಗಿನ ಜಾವ ನಡೆದಿದೆ.

Advertisement

ಅಪಘಾತದ ಭೀಕರತೆಗೆ ಬಸ್ ಚಾಲಕ, ಕ್ಲಿನರ್ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹುಣಸೂರು ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.

ಕೇರಳದ ಕೊಲ್ಲಂನಿಂದ 45 ಮಂದಿ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನ ಕಡೆಗೆ ಬರುತ್ತಿದ್ದ ಕೆಪಿಆರ್ ಟ್ರಾವೆಲ್ಸ್‌ನ ಖಾಸಗಿ ಬಸ್‌ಗೆ ಮೈಸೂರಿನಿಂದ ಸಿಮೆಂಟ್ ತುಂಬಿದ ಲಾರಿಯೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆಲಾರಿ ಚಾಲಕನ ತಪ್ಪಿನಿಂದ ಮಾರ್ಗ ಬದಲಾಯಿಸಿದ್ದು

ಇದರಿಂದ ಡಿಕ್ಕಿ ತೀವ್ರಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಅಪಘಾತದಿಂದ ಮಧ್ಯರಸ್ತೆಯ ಗಲಭೆ ಉಂಟಾಗಿದ್ದು, ಹುಣಸೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here