ಭೀಕರವಾದ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನಿಗೆ ಗಂಭೀರ ಗಾಯ..!

0
Spread the love

ದೊಡ್ಡಬಳ್ಳಾಪುರ: ಭೀಕರವಾದ ಅಪಘಾತ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗುಂಡಮ್ಮಗೆರೆ ಕ್ರಾಸ್ ಸಮೀಪದ ನೆಲ್ಲುಕುಂಟೆ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

Advertisement

ಗುಂಡಮ್ಮಗೆರೆ ಗ್ರಾಮದ ವೆಂಕಟೇಶ್(45), ಶಿವಪುರ ಗ್ರಾಮದ ರಕ್ಷಿತ್ (25) ಮೃತ ದುರ್ದೈವಿಗಳಾಗಿದ್ದು, ಮುತ್ತೂರು ಗ್ರಾಮದ ವೆಂಕಟೇಶ್ (45)ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ ವೇಳೆ ಒಂದೇ ಬೈಕಿನಲ್ಲಿ‌ ಮೂರು ಜನ ಗುಂಡಮ್ಮಗೆರೆ ಕ್ರಾಸ್ ನಿಂದ ನೆಲ್ಲುಕುಂಟೆ ಕಡೆ ಹೋಗುವಾಗ ಆಯಾತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here