ಬೆಂಗಳೂರು:- ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ಜರುಗಿದೆ.
ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್(20) ಮೃತ ವಿದ್ಯಾರ್ಥಿಗಳು. ಇವರು ಕೇರಳ ಮೂಲದವರು ಎನ್ನಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಸಪ್ತಗಿರಿ ಕಾಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ರೈಲ್ವೆ ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ಪಿಜಿಗೆ ಟ್ರ್ಯಾಕ್ ಮೂಲಕ ಹೋಗಲು ಮುಂದಾಗಿದ್ದರು. ಈ ವೇಳೆ ಹೈಸ್ಪೀಡ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ UDR ಅಡಿಯಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಯುವಕ-ಯುವತಿ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ.



