ದಾರುಣ ಘಟನೆ: ಒಂದೇ ದಿನ ಇಬ್ಬರು ಪೊಲೀಸರು ಸಾವು – ಕಂಬನಿ ಮಿಡಿದ ಹಿರಿಯ ಅಧಿಕಾರಿಗಳು!

0
Spread the love

ಧಾರವಾಡ:- ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಜರುಗಿದೆ. ಒಂದೇ ದಿನ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಹಿರಿಯ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ.

Advertisement

ಓರ್ವ ಎಎಸ್‍ಐ ಹೃದಯಾಘಾತದಿಂದ ಹಾಗೂ ಮತ್ತೋರ್ವ ಹೆಡ್ ಕಾನ್ಸಟೇಬಲ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್ ಠಾಣೆಯ ಎಎಸ್‍ಐ ಚಂದ್ರಕಾಂತ ಹುಟಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪೊಲೀಸ್ ಠಾಣೆಯಿಂದ ಮನೆಗೆ ವಿಶ್ರಾಂತಿಗೆ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.

ಮತ್ತೋರ್ವ ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಎನ್.ಬಿ ಭಜಂತ್ರಿ ಬಹು ಅಂಗಾಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸರ ಸಾವಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ.


Spread the love

LEAVE A REPLY

Please enter your comment!
Please enter your name here