ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾದ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ನಡೆದಿದೆ.
ಪವಿತ್ರಾ ಒಂಟಿ (19) ಮತ್ತು ಕಾರ್ತಿಕ್ ನಾಯಕ್ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ. ಪವಿತ್ರಾ ಬನಹಟ್ಟಿಯ ಕೆಹೆಚ್ಡಿಸಿ ಕಾಲೋನಿ ನಿವಾಸಿಯಾಗಿದ್ದು, ಕಾರ್ತಿಕ್ ಅಸ್ಕಿ ಗ್ರಾಮದ ನಿವಾಸಿಯಾಗಿದ್ದಾನೆ.
ಮಂಗಳವಾರ ಇವರಿಬ್ಬರ ನಡುವೆ ವೈಮನಸ್ಸಿನಿಂದ ಜಗಳ ನಡೆದಿದ್ದು, ಇದರಿಂದ ಮನನೊಂದು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಈ ವಿಷಯ ತಿಳಿದ ಬಳಿಕ ಮನನೊಂದು ಕಾರ್ತಿಕ್ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



