ನೆಲಮಂಗಲ:- ನೇಣು ಬಿಗಿದುಕೊಂಡು ಹೋಟೆಲ್ ಮ್ಯಾನೇಜರ್ ಸೂಸೈಡ್ ಮಾಡಿಕೊಂಡ ಘಟನೆ ನೆಲಮಂಗಲದಲ್ಲಿ ಜರುಗಿದೆ. ನೆಲಮಂಗಲದ ಶ್ರೀನಂದಿ ವೈಭವ್ ಹೋಟೆಲ್ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
24 ವರ್ಷದ ಸನ್ನಿಧಿ ಮೃತ ಮ್ಯಾನೇಜರ್. ಕಬ್ಬಿಣದ ಆ್ಯಂಗಲ್ಗೆ ಸ್ಕ್ರೀನ್ ಬಟ್ಟೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವ್ಯವಹಾರದಲ್ಲಿ ಮನಸ್ಸಿಗೆ ಬೇಜಾರು ಮಾಡಿಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮೃತನ ಅಕ್ಕ ಶ್ರೀನಿಧಿಶೆಟ್ಟಿ ಎಂಬುವವರು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದು, ಆತ್ಮಹತ್ಯೆ ಬಗ್ಗೆ ಯಾವುದೇ ಅನುಮಾನ ಇಲ್ಲವೆಂದು ಹೇಳಿಕೆ ಕೊಟ್ಟಿದ್ದಾರೆ.
ಇನ್ನು ಹೋಟೆಲ್ ನಲ್ಲಿ ಕೆಲಸ ಮಾಡುವ ಸಮಂತ್ ಅವರಿಂದ ಪ್ರಕರಣ ಬೆಳಕಿಗೆ ಬಂದಿದೆ.