ಮನೆಯ ಬಾಗಿಲು ಮುರಿದು ಕಳ್ಳತನ: ಚಿನ್ನಾಭರಣ, ಬೆಳ್ಳಿ ದೋಚಿದ್ದ ನಾಲ್ವರು ಅರೆಸ್ಟ್!

0
Spread the love

ರಾಮನಗರ:- ಮಾಗಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮಾಗಡಿ ಪಟ್ಟಣದಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Advertisement

ಬಂಧಿತರನ್ನು ಸಾಧಿಕ್, ಖಾಲಿದ್, ಹಂಜಾ ಹಾಗೂ ಚೂರಿಕಟ್ಟೆ ಶಿವ ಎಂದು ಗುರುತಿಸಲಾಗಿದೆ. ಬಂಧಿತರಿಂದ 4 ಕೋಟಿ ರೂ. ಮೌಲ್ಯದ 5 ಕೆಜಿ 500 ಗ್ರಾಂ ಚಿನ್ನಾಭರಣ, ನಗದು ಹಾಗೂ 1 ಆಲ್ಟೋ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಸಾಧಿಕ್ ತನ್ನ ಸಹಚರರೊಂದಿಗೆ ಸೇರಿ ಕಾರಿನಲ್ಲಿ ಬಂದು, ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಮನೆಯಲ್ಲಿ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡು ಬಳಿಕ ರಾತ್ರಿ ವೇಳೆ ಮನೆಯ ಬಾಗಿಲು ಮುರಿದು ಕಳ್ಳತನ ಮಾಡುತ್ತಿದ್ದರು.

ಈ ನಾಲ್ವರ ಗ್ಯಾಂಗ್ ತರೀಕೆರೆ, ಬೇಲೂರು, ಸಾಗರ ಟೌನ್, ಮೂಡಿಗೆರೆ, ಕೆ.ಆರ್.ಪೇಟೆ ಟೌನ್, ಮಂಡ್ಯ ಗ್ರಾಮಾಂತರ, ಹಳೇಬೀಡು, ಹೊಳೇನರಸಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here