ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದು,ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಇದುವರೆಗಿನ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಸೇರಿದಂತೆ 231 ಸಾಕ್ಷ್ಯಗಳನ್ನೊಳಗೊಂಡಂತೆ ಒಟ್ಟು 3,991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಇತ್ತ ದರ್ಶನ್ ಅವರು ಬಳ್ಳಾರಿಯಲ್ಲಿ ಸಿಂಪಲ್ ಜೀವನ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಒಂಬತ್ತು ದಿನದಲ್ಲಿ 735 ರೂ. ಖರ್ಚು ಮಾಡಿದ್ದಾರೆ. ಜೈಲಿನ ಕ್ಯಾಂಟೀನ್ನಲ್ಲಿ ಟೀ, ಕಾಫಿಗಾಗಿ ಖರ್ಚು ಮಾಡಿದ್ದಾರೆ. ಜೈಲಿನಲ್ಲಿ ಒತ್ತಡಕ್ಕೆ ಒಳಗಾಗಿರುವ ಆರೋಪಿ ದರ್ಶನ್ ಕಾಫಿ, ಟೀ ಮೊರೆ ಹೋಗಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲ್ನಲ್ಲಿರುವ ಆರೋಪಿ ದರ್ಶನ್ ಅವರ ಪ್ರೀಜ್ನರ್ಸ್ ಪ್ರೈವೇಟ್ ಅಕೌಂಟ್ನಲ್ಲಿದ್ದ ಹಣ ಖರ್ಚಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ 35,000 ರೂ. ಹಣ ದರ್ಶನ್ ಅವರ ಪಿಪಿಸಿ ಅಕೌಂಟ್ನಲ್ಲಿತ್ತು. ದರ್ಶನ್ ಬಳ್ಳಾರಿ ಜೈಲಿಗೆ ಬಂದ ಬಳಿಕ ಅದೇ ಹಣ ವರ್ಗಾವಣೆ ಆಗಿತ್ತು. ಇದೀಗ ಅದೇ ಹಣದಲ್ಲಿ ಕಾಫಿ, ಟೀ ಗಾಗಿ ಖರ್ಚು ಮಾಡಿದ್ದಾಗಿ ಜೈಲು ಕ್ಯಾಂಟೀನ್ ಮೂಲಗಳಿಂದ ಮಾಹಿತಿ ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ರಾಜಾತಿಥ್ಯ ಆರೋಪದ ಕಾರಣ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.