ಉಡುಪಿ: ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿರುವ ಘಟನೆ ಉಡುಪಿಯ ಬೈಂದೂರು ತಾಲೂಕಿನ ನಾಗೂರು ಉಡುಪರ ಹಿತ್ತಲಿನಲ್ಲಿ ನಡೆದಿದೆ. ತೋಟದಲ್ಲಿ ಸಿಹಿ ನೀರಿನ ಬಾವಿಯಲ್ಲಿ ಮೊಸಳೆ ತೇಲಾಡುತ್ತಿತ್ತು. ಮೊಸಳೆ ನೋಡಿ ಹೌಹಾರಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
Advertisement
ಈ ಭಾಗದಲ್ಲಿ ಮೊಸಳೆಗಳು ಕಾಣ ಸಿಗುವುದೇ ಅಪರೂಪ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ನಾಗೂರಿನ ರತ್ನಾಕರ ಉಡುಪ ಎನ್ನುವವರ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯುವ ಯತ್ನದಲ್ಲಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮೊಸಳೆ ತೇಲಿ ಬಂದಿರುವ ಶಂಕೆ ಇದೆ.