ಶಿವಮೊಗ್ಗ: ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿರುವ ಘಟನೆ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಜರುಗಿದೆ.
ಘಟನೆಯಿಂದಾಗಿ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ಕಡೆ ಟ್ರಾಫಿಕ್ ಜಾಮ್ ಆಗಿವೆ. ಮರ ಸಂಪೂರ್ಣ ರಸ್ತೆಗೆ ಬಿದ್ದಿರುವ ಪರಿಣಾಮ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಘಟನೆ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಧಾವಿಸಿಲ್ಲ. ಘಾಟ್ ನಲ್ಲಿ ಓಡಾಟ ನಡೆಸುತ್ತಿದ್ದ ಲಾರಿ ಚಾಲಕರು ಮರ ತೆರವಿಗೆ ಪ್ರಯತ್ನ ಪಡುತ್ತಿದ್ದು ದೊಡ್ಡ ಮರ ಆಗಿರುವುದರಿಂದ ಮರ ತೆರವಿನ ಕಾರ್ಯ ಅಷ್ಟು ಸುಲಭ ಅಲ್ಲ ಎಂದು ಹೇಳಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ, ಸಂಚಾರ ಬಂದ್ ಆಗಿದ್ದು, ಮುಂದಿನ ಕ್ರಮ ಕಾದು ನೋಡಬೇಕಿದೆ.



