ಶುದ್ಧ ಪರಿಸರವಿದ್ದರಷ್ಟೇ ಮಾನವನ ಅಸ್ತಿತ್ವ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಶುದ್ಧ ಪರಿಸರವಿಲ್ಲದಿದ್ದರೆ ನಮ್ಮ ಅಸ್ತಿತ್ವಕ್ಕೆ ಬೆಲೆಯಿರುವುದಿಲ್ಲ. ಕಾರಣ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಇದೆ ಎಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಅಧ್ಯಕ್ಷರಾದ ನಂದಾ ಚಂದ್ರು ಬಾಳಿಹಳ್ಳಿಮಠ ಹೇಳಿದರು.

Advertisement

ಸಂಸ್ಥೆಯ ಮಹಿಳಾ ಘಟಕ ಹಾಗೂ ತೋಟಗಾರಿಕೆ ಇಲಾಖೆ ಗದಗ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಅವರು ಮಾತನಾಡುತ್ತಿದ್ದರು.

ತಿಳಿದೋ ತಿಳಿಯದೆಯೋ ನಾವು ಅನೇಕ ರೀತಿಯಿಂದ ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿದ್ದೇವೆ. ನಮ್ಮ ಪರಿಸರವನ್ನು ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದೂ ಆಗಿದೆ. ಅದನ್ನು ನೆನಪಿಸುವ ಉದ್ದೇಶದಿಂದಲೇ ಪ್ರತಿ ವರ್ಷ ಪರಿಸರ ದಿನಾಚರಣೆಯನ್ನು ಆಚರಿಸುತ್ತಾ ಬಂದಿದ್ದೇವೆ. ನಾವೆಲ್ಲರೂ ಎಚ್ಚೆತ್ತು ಪರಸರವನ್ನು ಉಳಿಸುವ ಕೆಲಸವನ್ನು ಮಾಡೋಣ ಎಂದು ತಿಳಿಸಿದರು.

ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿಗಳಾದ ಮಂಜುನಾಥ ಹೂಗಾರ ಮಾತನಾಡುತ್ತಾ, ಪರಿಸರ ರಕ್ಷಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಉತ್ತಮ ಪರಿಸರವಿಲ್ಲದೆ ಮಾನವ ಬದುಕುವುದು ಕಷ್ಟ. ಪ್ರತಿಯೊಬ್ಬರೂ ಮನೆಯ ಆವರಣ ಮತ್ತು ಖಾಲಿ ಇರುವ ಸ್ಥಳಗಳಲ್ಲಿ ಸಸಿ ನೆಟ್ಟು ಬೆಳೆಸುವ ಮೂಲಕ ಎಲ್ಲರೂ ಪರಿಸರ ರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಅದಕ್ಕೆ ಬೇಕಾಗುವ ಸಸಿಗಳು ನಮ್ಮ ಇಲಾಖೆಯಲ್ಲಿ ದೊರೆಯುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಮಾಜಿ ಅಧ್ಯಕ್ಷರಾದ ಸುವರ್ಣಾ ಎಸ್.ಮದರಿಮಠ, ಸುಧಾ ಚ.ಹುಣಸಿಕಟ್ಟಿ, ಶೋಭಾ ಎಸ್.ಅಂಗಡಿ, ಜಯಶ್ರೀ ಉಗಲಾಟದ, ಸುಷ್ಮಾ ಎಸ್.ಜಾಲಿ, ಸುಜಾತಾ ಎಸ್.ಗುಡಿಮನಿ, ಲಲಿತಾ ಗು.ತಡಸದ, ಸುನಿತಾ ಪಾಟೀಲ, ನಿರ್ಮಲಾ ಧ.ಕೊಳ್ಳಿ, ರಜಿಯಾ ಮುಲ್ಲಾನವರ, ಸುನೀತಾ ಪಾಟೀಲ ಹಾಗೂ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರೆAದು ಸಂಸ್ಥೆಯ ಮಹಿಳಾ ಘಟಕದ ಗೌರವ ಕಾರ್ಯದರ್ಶಿ ಜ್ಯೋತಿ ರಾಮನಗೌಡ ದಾನಪ್ಪಗೌಡ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here