ದೇವನಹಳ್ಳಿ: ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಕಲಹ ಉಂಟಾಗಿ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಸಾವನಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರತ್ನ ( 38 ) ಸಾವನ್ನಪಿದ ಗೃಹಿಣಿಯಾಗಿದ್ದು,
ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ ಮೃತಳ ಅಣ್ಣ ಮತ್ತು ತಾಯಿ ಆರೋಪಿಸಿದ್ದು,
ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಸಾಂಬಾರ್ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಗಂಡ ಮತ್ತು ಮಕ್ಕಳು ಹೇಳುತ್ತಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



