ಕಲಬುರಗಿ: ಶೀಲ ಶಂಕಿಸಿ ಪತಿಯಿಂದ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವಂತಹ ಮಾಡಿ ಪರಾರಿಯಾಗಿರುವ ಘಟನೆ ನಗರದ ಶಹಾಬಜಾರ್ ಬಡಾವಣೆಯಲ್ಲಿ ನಡೆದಿದೆ. ರೂಪಾ (32) ಕೊಲೆಯಾಗಿರುವ ಮಹಿಳೆಯಾಗಿದ್ದು, ಪತಿ ವೆಂಕಟೇಶ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಆರೋಪಿ ವೆಂಕಟೇಶ್ 10 ವರ್ಷಗಳ ಹಿಂದೆ ರೂಪಾಳನ್ನು ಮದುವೆಯಾಗಿದ್ದ.
3 ತಿಂಗಳ ಹಿಂದೆಯೇ ಪತ್ನಿಯ ಶೀಲ ಶಂಕಿಸಿ ಆಕೆಯೊಂದಿಗೆ ವೆಂಕಟೇಶ್ ಜಗಳವಾಡಿದ್ದ. ಇದರಿಂದ ಬೇಸತ್ತ ರೂಪಾ ಪತಿಯನ್ನು ಬಿಟ್ಟು ತನ್ನ ಮಕ್ಕಳೊಂದಿಗೆ ಶಹಾಬಜಾರ್ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಜೀವನ ನಿರ್ವಹಣೆಗಾಗಿ ಹೋಟೆಲ್ನಲ್ಲಿ ಸಮೋಸ ಮಾಡುತ್ತಿದ್ದ ರೂಪಾ,
ಮಂಗಳವಾರ ಬೆಳಗ್ಗೆ 8:30ರ ಆಸುಪಾಸಿನಲ್ಲಿ ನಡೆದುಕೊಂಡು ಹೋಟೆಲ್ಗೆ ತೆರಳುತ್ತಿದ್ದಾಗ ಅಲ್ಲಿಗೆ ಬಂದ ಆಕೆಯ ಪತಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ವೆಂಕಟೇಶ್, ಪತ್ನಿಗೆ ಚಾಕು ಇರಿದು ಬೈಕ್ನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯ ಆಧಾರದ ಮೇಲೆ ವೆಂಕಟೇಶ್ ವಿರುದ್ಧ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.



