ಬೆಳಗಾವಿ: ಪತ್ನಿಯ ಮೇಲಿನ ಶೀಲ ಶಂಕೆ ಮತ್ತು ಕುಟುಂಬದ ಕಲಹದಿಂದ ಕೋಪಗೊಂಡ ಪತಿ, ಆಕೆಯನ್ನು ಮಲಗಿರುವಾಗಲೇ ಎಳೆದುಕೊಂಡು ಹೋಗಿ ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಬಸವರಾಜ ಜೋಡಳ್ಳಿ ತನ್ನ ಪತ್ನಿ ಶಿವಕ್ಕ ಜೋಡಳ್ಳಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆಯ ನಂತರ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಶಿವಕ್ಕ ಜೋಡಳ್ಳಿ ಮೊದಲ ಗಂಡನ ಮರಣದ ಬಳಿಕ ಬಸವರಾಜ ಜೋಡಳ್ಳಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಆದರೆ ದಾಂಪತ್ಯ ಜೀವನದಲ್ಲಿ ಉಂಟಾದ ಸಮಸ್ಯೆಗಳ ಕಾರಣ ಅವರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
ಘಟನೆಯ ದಿನ ಬೆಳಗ್ಗೆ ಸುಮಾರು 7:30ರ ಸುಮಾರಿಗೆ ಪತ್ನಿಯನ್ನು ಮೊದಲು ಹಲ್ಲೆ ಮಾಡಿ, ಬಳಿಕ ಚಾಕುವಿನಿಂದ ಇರಿದು, ಕೊನೆಗೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.



