ಹಣ ವ್ಯರ್ಥವಾಗಿ ಖರ್ಚು ಮಾಡ್ಬೇಡ ಎಂದು ಬುದ್ದಿವಾದ ಹೇಳಿದ ಹೆಂಡ್ತಿಯನ್ನೇ ಕೊಂದ ಗಂಡ!

0
Spread the love

ಚಿತ್ರದುರ್ಗ:- ಹಣ ವ್ಯರ್ಥವಾಗಿ ಖರ್ಚು ಮಾಡ್ಬೇಡ ಎಂದು ಬುದ್ದಿವಾದ ಹೇಳಿದ ಹೆಂಡ್ತಿಯನ್ನೇ ಗಂಡನೋರ್ವ ಕೊಲೆಗೈದ ಘಟನೆ ಚಿತ್ರದುರ್ಗ ತಾಲ್ಲೂಕಿನ ಮೆದೇಹಳ್ಳಿ ಗ್ರಾಮದಲ್ಲಿ ಜರುಗಿದೆ.

Advertisement

ಶ್ರೀದೇವಿ ಮೃತ ದುರ್ದೈವಿ ಮಹಿಳೆ. ಉಮಾಪತಿ ಪತ್ನಿಯನ್ನೇ ಕೊಂದ ಪಾಪಿ ಗಂಡ. ಉಮಾಪತಿ ತನ್ನ ಜಮೀನು ಮಾರಾಟದಿಂದಾಗಿ ಬಂದ ಹಣವನ್ನೆಲ್ಲಾ ಮನಬಂದಂತೆ ಖರ್ಚು ಮಾಡುತ್ತಾನೆಂಬ ಹಿನ್ನೆಲೆ ಪತ್ನಿ ಶ್ರೀದೇವಿ ಆಗಾಗ್ಗೆ ಎಚ್ಚರಿಸುತಿದ್ದಳು. ಈ ವಿಚಾರಕ್ಕೆ ಇಬ್ಬರ ಮಧ್ಯೆ ಕಲಹ ನಿರಂತರವಾಗಿತ್ತು.

ಇನ್ನು ಉಳಿದ ಜಮೀನನ್ನು ತನ್ನ ಹೆಸರಿಗೆ ಹಾಗೂ ಮಗಳ ಹೆಸರಿಗೆ ಮಾಡಿಸಿಕೊಡಿ ಎಂದು ಒತ್ತಾಯ ಸಹ ಮಾಡುತ್ತಿದ್ದರು. ಇದರಿಂದಾಗಿ ಆಕ್ರೋಶಗೊಂಡ ಉಮಾಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ಕೆಚ್ ಹಾಕಿ, ಫೆಬ್ರವರಿ 7 ರಂದು ಬೆಳಗ್ಗೆ ಶ್ರೀದೇವಿ ಮನೆಯಲ್ಲಿ ಪೂಜೆ ಮಾಡುತ್ತಿದ್ದಾಗ, ಆಕೆಯ ಸೀರೆಯಿಂದ ಕೊರಳಿಗೆ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಈ ಸಂಬಂಧ ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಉಮಾಪತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here