HomePolitics Newsಈ ಅವಧಿಗೆ ಅಲ್ಲ, 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

ಈ ಅವಧಿಗೆ ಅಲ್ಲ, 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

For Dai;y Updates Join Our whatsapp Group

Spread the love

ದಾವಣಗೆರೆ: ಜನರು ತಮ್ಮ ಮೇಲಿನ ಅಭಿಮಾನದಿಂದ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಾರೆ. ಆದರೆ ಅದು ಅವಧಿಗೆ ಸಂಬಂಧಪಟ್ಟದ್ದಲ್ಲ, ಮುಂದಿನ 2028 ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರುಮುಂದಿನ ಸಿಎಂ ಸತೀಶ್ ಜಾರಕಿಹೊಳಿಎಂದು ಘೋಷಣೆ ಕೂಗುವುದು ನಮ್ಮ ಮೇಲಿನ ಅಭಿಮಾನದ ಪ್ರತಿಫಲ. ಆದರೆ ಈಗಲೇ ನಾನು ಸಿಎಂ ಆಗುತ್ತೇನೆ ಎಂದು ಹೇಳಿಲ್ಲ. ಅವಧಿಯಲ್ಲಿ ಯಾರು ಸಿಎಂ ಆಗುತ್ತಾರೆ ಎಂಬುದು ಪಕ್ಷದ ನಿರ್ಧಾರ. ನಾವು ಮುಂದಿನ ಚುನಾವಣೆಗೆ ಸಿಎಂ ಸ್ಥಾನದ ಆಕಾಂಕ್ಷಿಗಳು ಮಾತ್ರ ಎಂದು ಹೇಳಿದರು.

ಪ್ರಸ್ತುತ ಅಸ್ಸಾಂ ವಿಧಾನಸಭಾ ಚುನಾವಣೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗಳು ಎದುರಿವೆ. ಇಂತಹ ಸಂದರ್ಭದಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆ ನಡೆಸುವುದು ಸೂಕ್ತವಲ್ಲ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಸಾಕಷ್ಟು ಜವಾಬ್ದಾರಿಗಳಿದ್ದು,

ಕಾರಣಕ್ಕಾಗಿ ಅವರು ದೆಹಲಿಗೆ ಆಗಾಗ ಭೇಟಿ ನೀಡುತ್ತಾರೆ ಎಂದು ತಿಳಿಸಿದರು.ಯಾವುದೇ ವಿಷಯದಲ್ಲಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ವೇ ಆಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!