ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಒಗ್ಗಟ್ಟಿಗೆ ಮತ್ತೊಮ್ಮೆ ಅದೃಷ್ಟ ಒಲಿದು ಬಂದಿದೆ. ಮ್ಯಾಜಿಕ್ ನಂಬರ್ ದಾಟಿ ದಾಖಲೆಯ ಗೆಲುವು ಪಡೆದ ಮಹಾಯುತಿ ಮೈತ್ರಿ ನೂತನ ಸರ್ಕಾರ ರಚನೆಯ ಕಸರತ್ತು ನಡೆಸ್ತಿದೆ. ಇದರ ಬೆನ್ನಲ್ಲಿಯೇ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಏಕನಾಥ್ ಶಿಂಧೆ, ನಾನು ಯಾವತ್ತೂ ಮುಖ್ಯಮಂತ್ರಿ ಆಗುತ್ತೇನೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನಸಹಕಾರ ಯಾವಾಗಲೂ ಇರುತ್ತದೆ ಎಂದರು.
ನನ್ನ ಪ್ರಕಾರ ಸಿಎಂ ಎಂದರೆ ಕಾಮನ್ ಮ್ಯಾನ್. ನಾವು ತೆಗೆದುಕೊಂಡ ನಿರ್ಧಾರಗಳು ಇತಿಹಾಸ ಪುಟದಲ್ಲಿ ಸೇರಿವೆ. ನನಗೆ ಮೇಲೆ ಯಾರ ಸಿಟ್ಟಿಲ್ಲ. ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ನಾನು ಪ್ರಚಾರಕ್ಕಾಗಿ ಕೆಲಸ ಮಾಡಿಲ್ಲ. ಸಾಮಾನ್ಯನಂತೆ ಕೆಲಸ ಮಾಡಿದ್ದೇನೆ. ಮಹಾಯುತಿ ಒಕ್ಕೂಟ ಯಾರನ್ನೂ ಆಯ್ಕೆ ಮಾಡುತ್ತದೋ ಅವರಿಗೆ ನನ್ನ ಬೆಂಬಲ ಇರಲಿದೆ ಎಂದು ತಿಳಿಸಿದರು. ನನಗೆ ಪ್ರಧಾನಿ ಮೋದಿ ಕರೆ ಮಾಡಿದ್ದರು. ಏನೇ ಆಗಲಿ ಜೊತೆಗೆ ಇರುತ್ತೇನೆ ಎಂದು ಹೇಳಿದ್ದೇನೆ. ನೀವು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ. ಮೋದಿ ಅವರು ಕೈಗೊಳ್ಳುವ ನಿರ್ಧಾರಗಳೇ ಅಂತಿಮ ಎಂದು ಹೇಳಿದರು.