ಬೆಂಗಳೂರು: ಜನ ಗ್ಯಾರಂಟಿಯಾಗಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಲೋಕಲ್ನಲ್ಲಿ ಇರುವವರು ಕೆಲಸ ಮಾಡಿದ್ದಾರೆ. ಜನರು ಅವರ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್ಗೆ ಬಂದಿದ್ದಕ್ಕೆ ಯಾರ ವಿರೋಧವೂ ಇಲ್ಲ.
ಯೋಗೇಶ್ವರ್ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಇದೆ. ಸೋತರೂ ಗೆದ್ದರೂ ಯಾರು ಜನರ ಜೊತೆ ಇರುತ್ತಾರೋ ಅವರನ್ನ ಜನ ಗೆಲ್ಲಿಸುತ್ತಾರೆ ಎನ್ನುವ0 ವಿಶ್ವಾಸವಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಜನ ಗ್ಯಾರಂಟಿಯಾಗಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ. ಸಂಡೂರಿನಲ್ಲಿ ತುಕಾರಾಂ ಪತ್ನಿ ಕೂಡಾ ಗೆಲ್ಲುತ್ತಾರೆ ಎಂದರು.
ಇನ್ನೂ ಉಪಚುನಾವಣೆ ರಾಜ್ಯ ರಾಜಕೀಯಕ್ಕೆ ದಿಕ್ಸೂಚಿ ಎಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಕಿಡಿಕಾರಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಏನು ಚಾಳಿ ಇದೆ ಗೊತ್ತಿಲ್ಲ. 136 ಜನ ಗೆದ್ದು ಹಳೆ ಚಾಳಿನಾ ಮತ್ತೆ ತರಲು ವ್ಯವಸ್ಥೆ ಮಾಡಿದರೆ ಅವರನ್ನು ಎಷ್ಟು ದಡ್ಡರು ಎಂದು ಹೇಳಬೇಕು ಗೊತ್ತಿಲ್ಲ. 136 ಜನರನ್ನ ಈ ರಾಜ್ಯದ ಜನರು ಮತ ಹಾಕಿ ಗೆಲ್ಲಿಸಿದ್ದಾರೆ. ಬಿಜೆಪಿಯನ್ನ ಹೀನಾಯವಾಗಿ ಸೋಲಿಸಿ ಗೆಲ್ಲಿಸಿದ್ದಾರೆ ಎಂದು ಹೇಳಿದರು.