ನಟ ಅಲ್ಲು ಅರ್ಜುನ್ ಬಂಧನದಲ್ಲಿ ನನ್ನ ಹಸ್ತಕ್ಷೇಪ ಇಲ್ಲ: ಸಿಎಂ ರೇವಂತ್ ರೆಡ್ಡಿ ಸ್ಪಷ್ಟನೆ

0
Spread the love

ಪುಷ್ಪ 2 ಸಿನಿಮಾದ ಪ್ರೀಮಿಯರ್ ವೇಳೆ ಮಹಿಳೆಯೊಬ್ಬರು ಮೃತಪಟ್ಟಿದ್ದು ಈ ಬಗ್ಗೆ ಎಫ್ ಐ ಆರ್ ದಾಖಲಾಗಿತ್ತು. ಈಗಾಗಲೇ ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದ್ದು ಇಂದು ನಟ ಅಲ್ಲು ಅರ್ಜುನ್ ಅವರನ್ನು ಹೈದಾರಬಾದ್ ಪೊಲೀಸರು ಬಂಧಿಸಿದ್ದರು.

Advertisement

ಅಲ್ಲು ಅರ್ಜುನ್ ಬಂಧನದ ಹಿಂದೆ ರಾಜಕೀಯದ ಕೈವಾಡ ಇರಬಹುದು ಎಂಬ ಗುಮಾನಿ ಅನೇಕರಿಗೆ ಮೂಡಿತ್ತು. ಈ ವಿಚಾರದಲ್ಲಿ ಅನೇಕರು ತೆಲಂಗಾಣ ಸಿಎಂ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ದೂರಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ರೇವಂತ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಅಲ್ಲು ಅರ್ಜುನ್ ಬಂಧನದ ಬಗ್ಗೆ ಸಿಎಂ ರೇವಂತ್ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ‘ಅಲ್ಲು ಅರ್ಜುನ್ ವಿಚಾರದಲ್ಲಿ ಕಾನೂನು ತನ್ನ ಕೆಲಸ ಮಾಡಲಿದೆ. ಅವರ ಬಂಧನದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನು ಪ್ರಕ್ರಿಯೆ ನಡೆಸಲಾಗುವುದು’ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಅಲ್ಲು ಅರ್ಜುನ್ ಬಂಧನದ ನಂತರ, ಚಿರಂಜೀವಿ ದಂಪತಿಗಳು ಮತ್ತು ನಾಗಬಾಬು ಅಲ್ಲು ಅರ್ಜುನ್ ನಿವಾಸವನ್ನು ತಲುಪಿದ್ದಾರೆ. ಈ ಘಟನೆಯಿಂದ ಶಾಕ್ ಆಗಿರೋ ಚಿರಂಜೀವಿ ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡು ಅಲ್ಲು ಅರ್ಜುನ್ ಮನೆಗೆ ಆಗಮಿಸಿದ್ದಾರೆ. ಅಲ್ಲು ಅರ್ಜುನ್ ಅವರ ಬಂಧನದ ಬಳಿಕ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಮೂಡಿದೆ. ನೆಚ್ಚಿನ ನಟ ಯಾವಾಗ ಹೊರಕ್ಕೆ ಬರುತ್ತಾರೆ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಒಂದೊಮ್ಮೆ ಇವತ್ತು ಜಾಮೀನು ಸಿಗದೆ ಇದ್ದರೆ ಸೋಮವಾರದವರೆಗೆ ಅಲ್ಲು ಅರ್ಜುನ್ ಅವರು ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದ್ದು ಇದರಿಂದ ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here