ನವದೆಹಲಿ: ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ, 7 ಬಾರಿ ಚುನಾವಣೆ ಗೆದ್ದಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜ್ಯಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಅವರು ಸಿಬಿಐ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ ಬಿಸಿ ಚರ್ಚೆ ನಡೆಯಿತು.
Advertisement
ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಬಿಐ ಗೃಹ ಸಚಿವಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಸಾಕೇತ್ ಗೋಖಲೆ ಅವರ ಬಗ್ಗೆ ವೈಯಕ್ತಿಕ ಹೇಳಿಕೆ ನೀಡಿದಾಗ ಅಮಿತ್ ಶಾ “ನಾನು ಯಾರ ದಯೆಯಿಂದ ಅಥವಾ ಯಾವುದೇ ಸಿದ್ಧಾಂತವನ್ನು ವಿರೋಧಿಸಿ ಇಲ್ಲಿಗೆ ಬಂದಿಲ್ಲ. ಭಯಪಡುವ ಪ್ರಶ್ನೆಯೇ ಇಲ್ಲ. ನಾನು 7 ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ” ಎಂದಿದ್ದಾರೆ.