ಸತತ 7 ವರ್ಷಗಳಿಂದ RCB ಪರ ಆಟವಾಡಿದ್ದ ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಪ್ರಾಂಚೈಸಿ ಕೈ ಬಿಟ್ಟಿದೆ.
ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ಸಿರಾಜ್ ಗುಜರಾತ್ ಟೈಟಾನ್ಸ್ ತಂಡದ ಪಾಲಾಗಿದ್ದಾರೆ. ಅತ್ತ ಜಿಟಿ ತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆ ಸಿರಾಜ್ ಆರ್ಸಿಬಿ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಧನ್ಯವಾದಗಳನ್ನು ತಿಳಿಸಿದ್ದಾರೆ.
‘ನನ್ನ ಪ್ರೀತಿಯ ಆರ್ಸಿಬಿಗೆ.. ಆರ್ಸಿಬಿ ಜೊತೆಗಿನ ಏಳು ವರ್ಷಗಳು ತುಂಬಾ ಖುಷಿ ನೀಡಿವೆ. ಆರ್ಸಿಬಿ ಜರ್ಸಿಯಲ್ಲಿನ ದಿನಗಳನ್ನು ನೆನಪಿಸಿಕೊಂಡಾಗ ಹೃದಯ ಉಕ್ಕಿ ಬರುತ್ತದೆ. ಕೃತಜ್ಞತೆ, ಪ್ರೀತಿಯ ಭಾವನೆ ನನ್ನಲ್ಲಿ ತುಳುಕುತ್ತದೆ. ಮೊದಲ ಬಾರಿಗೆ ನಾನು ತೊಟ್ಟ ಜರ್ಸಿ, ಆರ್ಸಿಬಿ ಜೊತೆಗಿನ ಬಂಧವನ್ನು ತುಂಬಾನೇ ಬಿಗಿಯಾಗಿಸಿದೆ. ಅದು ಅಷ್ಟರಮಟ್ಟಿಗೆ ನಮ್ಮ ಬಂಧವನ್ನು ಗಟ್ಟಿಯಾಗಿಸುತ್ತೆ ಅಂತಾ ಎಂದೂ ಯೋಚಿಸಿರಲಿಲ್ಲ.
ಆರ್ಸಿಬಿ ಪರ ನಾನು ಮಾಡಿದ ಮೊದಲ ಬಾಲ್ನಿಂದ ಹಿಡಿದು, ಪ್ರತಿ ವಿಕೆಟ್, ಆಡಿದ ಪ್ರತಿ ಪಂದ್ಯ, ನಿಮ್ಮೊಂದಿಗೆ ಕಳೆದ ಪ್ರತಿಕ್ಷಣ. ಆ ನನ್ನ ಪ್ರಯಾಣ ಅಸಾಧಾರಣ. ಈ ಜರ್ನಿಯಲ್ಲಿ ಏರಿಳಿತಗಳಿದ್ದವು. ಆದರೆ ನೆನಪುಗಳು ಸ್ಥಿರವಾಗಿ ಉಳಿದಿವೆ. RCB ಅಂದರೆ ಹೃದಯ ಬಡಿತ, ಮನೆಯಂತೆ ಭಾಸವಾಗುವ ಕುಟುಂಬ. ಇದು ಫ್ರಾಂಚೈಸಿಗಿಂತ ದೊಡ್ಡದು ಎಂದು ಬರೆದುಕೊಳ್ಳುವ ಮೂಲಕ RCB ಮೇಲಿನ ಅಭಿಮಾನ ತೋರಿದ್ದಾರೆ.