ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನನ್ನ ಜೊತೆ ಯಾರೂ ಈ ಬಗ್ಗೆ ಚರ್ಚೆ ಮಾಡಿಲ್ಲ. ಅಧ್ಯಕ್ಷರ ಬದಲಾವಣೆ ವಿಚಾರ ಸಿಎಂ, ಡಿಸಿಎಂ, ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.
Advertisement
ನಾನು ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಮಾತಾಡಿದ್ದು ಇಲಾಖೆ ಬಗ್ಗೆ, ನಮ್ಮ ಕ್ಷೇತ್ರದ ಬಗ್ಗೆ. ಡಿಕೆ ಶಿವಕುಮಾರ್ ಅವರು ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಬಹುದು. ಅವರು ಪಕ್ಷದ ಅಧ್ಯಕ್ಷರು. ಅಂತಿಮವಾಗಿ ಹೈಕಮಾಂಡ್ ಎಲ್ಲವೂ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.