ಮೈಸೂರು: ನಾನು ಸಿದ್ದರಾಮಯ್ಯ ಅವರಿಗೆ ದ್ರೋಹ ಮಾಡಿಲ್ಲ ಎಂದು ಮೈಸೂರು ಮುಡಾ ಅಧ್ಯಕ್ಷ ಕೆ. ಮರೀಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಯಾರಿಗೂ ದ್ರೋಹ ಮಾಡಿಲ್ಲ. ನನ್ನ ಮನೆ ದೇವರ ಮೇಲೆ ಆಣೆ ಮಾಡಿ ಹೇಳ್ತೀನಿ.
Advertisement
ನಾನು ಸಿದ್ದರಾಮಯ್ಯ ಅವರಿಗೆ ದ್ರೋಹ ಮಾಡಿಲ್ಲ. ಆದರೆ ಪಕ್ಷದ ಮುಖಂಡರು, ಕಾರ್ಯಕರ್ತರು ನನ್ನ ಮೇಲೆ ಆರೋಪ ಮಾಡ್ತಾರೆ. ನಾನು ಅಧ್ಯಕ್ಷ ಆದ ಮೇಲೆ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಅಂತಿದ್ದಾರೆ. ದಯಮಾಡಿ ಇಂತಹ ಆರೋಪದ ಮೂಲಕ ತೇಜೋವಧೆ ಮಾಡಬೇಡಿ ಎಂದು ಹೇಳಿದರು.