ಈ ಘಟನೆ ಆದಾಗಿನಿಂದ ಮನಸ್ಸಿಗೆ ನೆಮ್ಮದಿ ಇಲ್ಲ: ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ ಮಾಡಿದ ವ್ಯಕ್ತಿಯಿಂದ ಕ್ಷಮೆ ಯಾಚನೆ

0
Spread the love

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್‌ ಹಿಟ್‌ ಆಗಿದ್ದು ಬಾಕ್ಸ್‌ ಆಫೀಸ್‌ ನಲ್ಲಿ ಕೋಟಿ ಕೋಟಿ ಕಲೆಕ್ಷನ್‌ ಮಾಡುತ್ತಿದೆ. ರಿಲೀಸ್‌ ಆದ ಕೆಲವೇ ದಿನಗಳಲ್ಲಿ ಕೋಟಿ ಕ್ಷಬ್‌ ಸೇರಿರುವ ಸಿನಿಮಾ ದೇಶ ವಿದೇಶದಲ್ಲೂ ಸದ್ದು ಮಾಡುತ್ತಿದೆ. ಆದರೆ, ಈ ಸಿನಿಮಾ ರಿಲೀಸ್ ಆದ ಬಳಿಕ ಕೆಲವರು ದೈವವನ್ನು ಅನುಕರಣೆ ಮಾಡಲು ಹೋಗಿದ್ದು ಇದೀಗ ಇದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಈಗ ಇದೇ ರೀತಿ ಮಾಡಿದ ವ್ಯಕ್ತಿಯೋರ್ವ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆ ಕೇಳಿದ್ದಾನೆ.

Advertisement

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆ ಕಂಡಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಈ ಸಿನಿಮಾ ರಿಲೀಸ್ ಆದ ಬಳಿಕ ವ್ಯಕ್ತಿಯೊಬ್ಬನು ಥಿಯೇಟರ್​ನ ಹೊರ ಭಾಗದಲ್ಲಿ ದೈವ ಬಂದಂತೆ ಆಡಿದ್ದು ಈ ವಿಡಿಯೋ ಸಖತ್‌ ವೈರಲ್ ಆಗಿತ್ತು. ‘ರಿಷಬ್ ಅವರಲ್ಲಿ ದೇವರನ್ನು ನೋಡಿದೆ’ ಎಂದೆಲ್ಲ ಆತ ಹೇಳಿಕೊಂಡಿದ್ದ.

ಈ ವಿಡಿಯೋ ವೈರಲ್ ಆದ ಬಳಿಕ ಅನೇಕರು ವಿರೋಧ ಹೊರ ಹಾಕಿದ್ದರು. ಈ ರೀತಿ ಮಾಡೋದು ಸರಿ ಅಲ್ಲ ಎಂದು ಕೆಲವರು ಹೇಳಿದ್ದರು. ಇದು ದೈವಕ್ಕೆ ಮಾಡುವ ಅವಮಾನ ಎಂಬ ಮಾತುಗಳು ಕೂಡ ಕೇಳಿ ಬಂದವು. ಈಗ ಈ ವಿಚಾರದಲ್ಲಿ ಆ ವ್ಯಕ್ತಿ ಕ್ಷಮೆ ಕೇಳಿದ್ದಾನೆ.

‘ನನ್ನ ಹೆಸರು ವೆಂಕಟ್ ಎಂದು. ಇತ್ತೀಚೆಗೆ ವೈರಲ್ ಆದ ವಿಡಿಯೋ ನೋಡಿರ್ತೀರಿ. ಅದು ಉದ್ದೇಶ ಪೂರ್ವಕವಾಗಿ ಮಾಡಿಲ್ಲ. ರಿಷಬ್ ಶೆಟ್ಟಿ, ಕಾಂತಾರ ಟೀಮ್​ಗೆ ನನ್ನ ಕ್ಷಮೆ ಇರಲಿ. ಮಂಗಳೂರು ಜನತೆಗೆ, ತುಳು ನಾಡಿನ ಜನತೆಗೆ ಕ್ಷಮೆ ಇರಲಿ. ಪ್ಲೀಸ್ ಈ ರೀತಿ ಮಾಡಬೇಡಿ. ಈ ಘಟನೆ ಆದಾಗಿನಿಂದ ಮನಸ್ಸಿಗೆ ನೆಮ್ಮದಿ-ಶಾಂತಿ ಇಲ್ಲ. ನನ್ನನ್ನು ಕ್ಷಮಿಸಿ’ ಎಂದು ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here