ಬೆಳಗಾವಿ: ನಿನ್ನನ್ನು ರಾಜ್ಯದಲ್ಲಿ ಓಡಾಡದ ಹಾಗೆ ಮಾಡುವ ಶಕ್ತಿ ನನಗಿದೆ ಎಂದು ವಿಜಯೇಂದ್ರ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಗೋಕಾಕ್ನ ಅಂಕಲಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನನ್ನು ರಾಜ್ಯದಲ್ಲಿ ಓಡಾಡದ ಹಾಗೆ ಮಾಡುವ ಶಕ್ತಿ ನನಗಿದೆ ಎಂದು ಗುಡುಗಿದ ಜಾರಕಿಹೊಳಿ, ನಿನ್ನಂತ ಕೀಳು ಮಟ್ಟದ ರಾಜಕೀಯ ಮಾಡಲು ನನಗೆ ಬರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ವಿಜಯೇಂದ್ರ ಬಗ್ಗೆ ಗೌರವ ಇಲ್ಲ. ಅಧ್ಯಕ್ಷ ಸ್ಥಾನದ ಮೇಲೆ ಮಾತ್ರ ಗೌರವ ಇದೆ. ಅವರನ್ನ ಬದಲಿಸಿ ಹೊಸಬರಿಗೆ ಅವಕಾಶ ನೀಡಲಿ. ಯಡಿಯೂರಪ್ಪನವರೇ ಇನ್ನು ನೀವು ಸಿಎಂ ಆಗಲ್ಲ ಪದೇ ಪದೇ ಸೈಕಲ್ ಮೇಲೆ ಓಡಾಡಿದ್ದೀನಿ ಎಂದು ಹೇಳಬೇಡಿ ಅದರ ಎರಡು ಪಟ್ಟು ಲಾಭ ಪಡೆದುಕೊಂಡಿದ್ದಿರಿ ಎಂದರು.
ಪಕ್ಷಕ್ಕೆ ಬಂದು ಮೂರು ವರ್ಷ ಆಯ್ತು ಅಂತೀಯಾ. ನಾನು ನಿಮ್ಮ ಅಪ್ಪನನ್ನು ಸಿಎಂ ಮಾಡಲು ಬಂದಿದ್ದೆ. ನೀನು ಅದೇ ಹರಾಮಿ ದುಡ್ಡಲ್ಲಿ ಓಡಾಡ್ತಿದ್ದಿಯಾ ಎಂದು ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.