ಬೆಳಗಾವಿ: ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ರಾಜ್ಯಾದ್ಯಂತ ಪ್ರತಿಭಟನೆ ವಿಚಾರಕ್ಕೆ ಸಂಭಂಧಿಸಿದಂತೆ ಸಂಸದ ಜಗದೀಶ ಶೆಟ್ಟರ್ ಬೆಳಗಾವಿಯ ಶಿವಬಸವ ನಗರದಲ್ಲಿ ಪ್ರತಿಕ್ರಿಯೇ ನೀಡಿದರು. ಕಾನೂನು ರೀತಿ ಹೋರಾಟ ಮಾಡುತ್ತೇವೆ ಎಂದಿದ್ದರು. ರಾಜ್ಯಪಾಲರು ತನಿಖೆಗೆ ಆದೇಶ ಕೊಟ್ಟಿದ್ದಾರೆ. ತನಿಖೆ ಎದುರಿಸಿ ನಾನು ಸಾಚಾ ಎಂದು ಸಾಬೀತು ಮಾಡಬೇಕು. ರಾಜ್ಯಪಾಲರನ್ನು ಅಪಮಾನ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಸಾಂವಿಧಾನಿಕ ಹುದ್ದೆಗೆ ಕುಂದು ತರುವ ರೀತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾನೂನು ತಜ್ಞರ ಸಲಹೆ ಪಡೆದು ರಾಜ್ಯಪಾಲರು ನಿರ್ಧಾರ ಮಾಡಿದ್ದಾರೆ. ರಾಜ್ಯಪಾಲರ ನಿರ್ಣಯಗಳನ್ನು ಅನೇಕರು ಪ್ರಶ್ನೆ ಸಹ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಹಿರಿಯ ವಕೀಲರು ಬೆಂಗಳೂರಿಗೆ ಬಂದಿದ್ದಾರೆ. ರಾಜ್ಯಪಾಲರ ವಿರುದ್ಧ ಕೆಟ್ಟದಾಗಿ ನಡೆದುಕೊಳ್ಳುವುದು ಸರಿಯಲ್ಲ. ದಲಿತ ಸಮಾಜದ ವ್ಯಕ್ತಿ ಅಪಮಾನ ಮಾಡೋ ಕೆಲಸ ಮಾಡಬಾರದು. ಸಂವಿಧಾನದ ಹುದ್ದೆಯಲ್ಲಿರೋ ವ್ಯಕ್ತಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ. ಶಾಂತಿಯಿಂದ ಕಾನೂನು ಹೋರಾಟ ಮಾಡಿ ಯಾರು ಬೇಡ ಎನ್ನಲ್ಲ.
ಬೀದಿಗೆ ಇಳಿದು ಹೋರಾಟ ಮಾಡುವುದು ಸರಿಯಲ್ಲ. ತಕ್ಷಣ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಿತ್ತು. ಸಿಎಂ ಸಿದ್ದರಾಮಯ್ಯ ಈವರೆಗೆ ರಾಜೀನಾಮೆ ನೀಡುತ್ತಿಲ್ಲ. ಸಿಎಂ ಹುದ್ದೆಯಲ್ಲಿ ಇರಲು ಸಿದ್ದರಾಮಯ್ಯ ಅವರು ಅನರ್ಹ. ರಾಜ್ಯಪಾಲರ ನಿರ್ಧಾರಗಳು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ನಲ್ಲಿ ಅಂಗೀಕಾರವಾಗಿವೆ ಎಂದು ಶೆಟ್ಟರ್ ಸಮರ್ಥಿಸಿಕೊಂಡರು.