ಶ್ರಾವಣ ಮಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಬಳಿಕ ಬರುವ ಮತ್ತೊಂದು ಪವಿತ್ರ ಹಬ್ಬ ಈ ರಕ್ಷಾ ಬಂಧನ. ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯ ದಿನದಂದು ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತದೆ. ಇದು ಹಿಂದೂಗಳು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬದ ಸಂದರ್ಭ ಮಾರುಕಟ್ಟೆಯಲ್ಲಿ ಅನೇಕ ಶೈಲಿಯ ರಾಖಿಗಳು ಕಾಣಸಿಗುತ್ತವೆ.
ಅದೇ ರೀತಿ ನಟಿ ಸೋನಲ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಶೇರ್ ಮಾಡಿದ್ದಾರೆ. ನಾವು ಒಟ್ಟಿಗೆ ಇಲ್ಲದಿದ್ದರೂ, ನಮ್ಮ ಬಾಂಧವ್ಯ ಎಂದಿಗೂ ಮರೆಯಾಗುವುದಿಲ್ಲ. ನಾನು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮತ್ತು ನಾವು ನಿಮ್ಮನ್ನು ಪ್ರೀತಿಸುತ್ತೇವೆ ಅಣ್ಣ. ರಕ್ಷಾಬಂಧನದ ಶುಭಾಶಯಗಳು ದರ್ಶನ್ʼಗೆ ನಟಿ ಶುಭಕೋರಿದ್ದಾರೆ.
ಅಂದಹಾಗೆ, ‘ರಾಬರ್ಟ್’ ಸಿನಿಮಾದ ವೇಳೆ ಆದ ಪರಿಚಯ. ದರ್ಶನ್ ಜೊತೆಗಿನ ಸಹೋದರತ್ವದ ಒಡನಾಟ ಇಂದಿಗೂ ಮುಂದುವರೆದಿದೆ. ಪ್ರತಿ ವರ್ಷ ದರ್ಶನ್ ಮನೆಗೆ ತೆರಳಿ ನಟಿ ರಾಕಿ ಕಟ್ಟಿ ಶುಭಕೋರುತ್ತಿದ್ದರು. ಈ ವರ್ಷ ದರ್ಶನ್ ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆ ಅವರನ್ನು ಮಿಸ್ ಮಾಡಿಕೊಳ್ತಿದ್ದಾರೆ.